ಬುಧವಾರ, ಮಾರ್ಚ್ 25, 2015

ನಮ್ಮ ಸರ್ಕಾರ



ಹಣ 

ತಿಂದು ತೇಗ್ತಾರೆ
ನಮ್ಮ ಹಣ..
ಎದ್ದು ಕೇಳಿದರೆ
ಬೀಳುತ್ತೆ
ನಮ್ಮದೇ ಹೆಣ ...

ಆಚಾರ 

ಎಲೆಲ್ಲೂ ಬ್ರಷ್ಟಾಚಾರ
ಹೇಳುವುದು ಮಾತ್ರ
ಆಚಾರ ,
ಜನರ ಆಹಾಕಾರ
ಕೇಳಲ್ಲ ಸಿದ್ದು
ಸರ್ಕಾರ ...

ಮುದ್ದು

 ಮುದ್ದಿನಿಂದ 
 ಅಧಿಕಾರಕ್ಕೀರಿ'ಸಿದ್ದ'
 ಜನತೆಗೆ...
 ಸಿದ್ದುವಿನಿಂದ
 ಅನ್ಯಾಯ,ಅಕ್ರಮಗಳ ಗುದ್ದು ...


ನಿಮಗಾಗಿ
ನಿರಂಜನ್ 

ಶುಕ್ರವಾರ, ಮಾರ್ಚ್ 20, 2015

World Sparrow Day

                                           ಗುಬ್ಬಿಗಳು ಹಾಗು ಅವುಗಳ ಆವಾಸ ....

ಸ್ನೇಹಿತರೆ , ನಾವು ಚಿಕ್ಕವರಿದ್ದಾಗ ಕಾಗಕ್ಕ-ಗುಬ್ಬಕ್ಕನ ಕತೆಗಳನ್ನ ನಮ್ಮ ಅಜ್ಜಿಯರಿಂದ,ಅಪ್ಪ-ಅಮ್ಮನಿಂದ , ಪಂಚತಂತ್ರ ಕತೆಗಳಲ್ಲೂ ಬಹಳ ಕೇಳಿದ್ದೇವೆ. ಹಾಗೆಯೇ ಗುಬ್ಬಿಗಳ ಬಗ್ಗೆ ವಿಶೇಷವಾಗಿ ಅನೇಕ ಕಲ್ಪನೆಗಳನ್ನು ಮಾಡಿಕೊಂಡು, ಹಾರುವ ಹಕ್ಕಿ-ಪಕ್ಷಿಗಳನ್ನೂ ನೋಡಿ ಆನಂದವನ್ನು ಸಹ ಪಟ್ಟಿದ್ದೇವೆ. ನಮಗೆ ದಿನಬೆಳಗಾದರೆ ಮನೆಯ ಸುತ್ತಮುತ್ತಲಿನ ಗಿಡಗಳಲ್ಲಿ, ಹೂಬಳ್ಳಿ-ಬೇಲಿಗಳಲ್ಲಿ, ಎಲ್ಲೆಂದರಲ್ಲಿ ಗುಂಪು-ಗುಂಪು ಸುಂದರ ಗುಬ್ಬಿಗಳ ಕಾಣುತ್ತಿದ್ದವು. ಅವು ನಮ್ಮ ಜೊತೆ-ಜೊತೆಯಲ್ಲೇ ವಾಸಮಾಡುತ್ತಿದ್ದವು. ಅವುಗಳಿಂದ ನಮಗೆ ಗೊತ್ತಿಲ್ಲದ ರೀತಿಯಲ್ಲಿ ಅನೇಕ ಉಪಯೋಗಗಳು ಸಹ ಇದ್ದವು. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಗುಬ್ಬಿಗಳು ಸಹ ತಮ್ಮ ಕಾರ್ಯ ನಿರ್ವಹಿಸುತ್ತಿದ್ದವು.  ಆದರೆ ಈಗ ಪರೀಸ್ತಿತಿ ಸಂಪೂರ್ಣ ಬದಲಾಗಿದೆ, ಅಲ್ಲವೇ ?



ಕೆಲವು ವರ್ಷಗಳ ಹಿಂದೆ, ನಮ್ಮ ಅದೃಷ್ಟಕ್ಕಾದರು  ಕತೆಗಳಲ್ಲಿ ಕೇಳಿದ ಗುಬ್ಬಿಗಳನ್ನು ನಮ್ಮ ಕಣ್ಣಲ್ಲೇ, ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ನೋಡುವ ಅವಕಾಶವಾದರೂ ಇತ್ತು. ಆದರೆ ಈಗ ಕಾಗಕ್ಕ ಅಲ್ಲಿ-ಇಲ್ಲಿ ಕಂಡರೂ , ಗುಬ್ಬಕ್ಕನ ಮಾತ್ರ ಕಾಣ ಸಿಗುವುದಿಲ್ಲ. ಕಾರಣ , ನಾಗರೀಕತೆಯ ಉತ್ತುಂಗದ ಶಿಖರವೇರುವ ಹಾತುರದಲ್ಲಿ , ನಾವು ಗುಬ್ಬಿಗಳ ಆವಾಸಕ್ಕೆ ದಕ್ಕೆ ತಂದಿದ್ದವೆ. ಸಂಪೂರ್ಣ ನಗರೀಕರಣ, ಮರಗಿಡಗಳ ನಾಶ, ಮನೆಯ ಸುತ್ತಮುತ್ತ ಸ್ವಲ್ಪವೂ ಹಸಿರು ಬೆಳೆಯಲು ಬಿಡದೆ ಕಾಂಕ್ರೀಟುಕರಣ ಮಾಡುವುದರ  ಫಲವಾಗಿ, ನಮಗೆ ಇಂದು ಗುಬ್ಬಿಗಳು ನಗರ ಪ್ರದೇಶದಲ್ಲಿ ಕಾಣ ಸಿಗುತ್ತಿಲ್ಲ, ಒಂದು ಅರ್ಥದಲ್ಲಿ ನಗರಗಳಲ್ಲಿ ಗುಬ್ಬಿಗಳೇ ನಾಶವಾಗಿವೆ. ಹಳ್ಳಿಗಳಲ್ಲಿ ಕೂಡ ಅವುಗಳ ಸಂಖ್ಯೆ ತೀವ್ರವಾಗಿ ಕ್ಷೀಣಿಸಿದೆ.  

ಇದನ್ನು ಅರಿತ ಭಾರತದ ಒಂದು ಸಂಸ್ಥೆ " Nature Forever Society" ಮಾರ್ಚ್ ೨೦ ನ್ನು ಪ್ರಪಂಚದ ಗುಬ್ಬಿ ದಿನವನ್ನಾಗಿ ಆಚರಿಸುವುದರ ಜೊತೆಗೆ , ಜನರಲ್ಲಿ ಗುಬ್ಬಿಗಳ ಹಾಗು ಅವುಗಳ ಆವಾಸದ ಬಗ್ಗೆ ಜಾಗೃತಿ ಮೂಡಿಸಲು ಒಂದು ಒಳ್ಳೆಯ ಚಿಕ್ಕ ಹೆಜ್ಜೆಯನ್ನಿಟ್ಟಿತು. ಕಳೆದ ೫ ವರ್ಷಗಳ ಕೆಳಗೆ ಭಾರತದಲ್ಲಿನ ಈ ಒಂದು ಚಿಕ್ಕ ಸಂಸ್ಥೆ ಪ್ರಾರಂಬಿಸಿದ ಈ ಗುಬ್ಬಿ ದಿನಾಚರಣೆ ಹಾಗು ಅದರ ಉದ್ದೇಶವನ್ನು ಅರಿತ ಅನೇಕ ಅನೇಕ ರಾಷ್ಟ್ರಗಳು, ಇಂದು ತಮ್ಮ ದೇಶಗಳಲ್ಲೂ ಗುಬ್ಬಿಗಳ ಹಾಗು ಇತರೆ ಹಕ್ಕಿಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು " World Sparrow Day" ಎಂದು ಘೋಷಿಸಿ , ಆಚರಣೆಯನ್ನು ಮಾಡುತ್ತಾರೆ. 

ಗುಬ್ಬಿಗಳು ನಮ್ಮ ಬೆಳೆಗಳಲ್ಲಿನ ಕೀಟಗಳನ್ನು ತಿನ್ನುವುದರಿಂದ ರೈತನಿಗೆ ಸಹಾಯವಾಗಿವೆ. ಅದೇ ರೀತಿ ಮನೆಯ ಸುತ್ತಮುತ್ತಲಿನ ಗಿಡಗೆಂಟೆಗಳಲ್ಲಿನ ಅನೇಕ ಕೀಟಗಳನ್ನು ತಿಂದು ನಮ್ಮ ಸುತ್ತಲಿನ ಸ್ವಾಸ್ಥ್ಯ ಕಾಪಾಡುತ್ತವೆ. ಅತಿಯಾದ ನಗರೀಕರಣ, ಗಿಡ ಮರಗಳ ನಾಶ, ಅತ್ಯಾದುನಿಕ ತಾಂತ್ರಿಕತೆ, ಗುಬ್ಬಿಗಳ ಆವಾಸಕ್ಕೆ ದಕ್ಕೆ ಮಾಡುತ್ತಿವೆ ಎಂಬುವುದರಲ್ಲಿ ಎರಡು ಮಾತಿಲ್ಲ.ನಗರ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು,ತಿನ್ನಲು ಆಹಾರ ಸಿಗುತ್ತಿಲ್ಲ,ಗೂಡು ಕಟ್ಟಲು ಮರ ಗಿಡಗಳಿಲ್ಲ. ಹಾಗಾಗಿ ಅವುಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಇದು ಹೀಗೆಯೇ ಮುಂದುವರೆದರೆ ಮುಂದೊಂದು ದಿನ, ಕತೆ ಹಾಗು ಚಿತ್ರಪಟಗಳಲ್ಲಿ ಮಾತ್ರ ನಾವು ಗುಬ್ಬಿಗಳನ್ನು ನೋಡಬೇಕಾಗುತ್ತದೆ. 



ಗುಬ್ಬಿಗಳು ನಮ್ಮ ಪ್ರಕೃತಿಯಿಂದ ಸಂಪೂರ್ಣ ನಾಶವಾಗುವ ಮೊದಲು ನಾವು ಎಚ್ಚೆತ್ತುಕೊಂಡು, ನಮ್ಮ ಕೈಲಾದ ರೀತಿಯಲ್ಲಿ  ಅವುಗಳ ಸಂರಕ್ಷಣೆ ಮಾಡುವ ದಿಸೆಯಲ್ಲಿ ನಾವು ಕಾರ್ಯಪ್ರವೃತ್ತರಾಗಬೇಕು. ನಾವು ಮಾಡಬಹುದಾದಂತ ಸಣ್ಣ ಪುಟ್ಟ ಕೆಲಸಗಳೆಂದರೆ , 

೧.  ಸಣ್ಣ ಸಣ್ಣ ಗುಬ್ಬಿ ಗೂಡುಗಳನ್ನು ನಿರ್ಮಿಸಿ ಮನೆಯ ಕೈದೋಟಗಳಲ್ಲಿ, ಸುತ್ತಲ್ಲಿನ ಗಿಡ-ಮರಗಳಲ್ಲಿ, ಕಂಪೌಂಡಿನ ಅಂಚುಗಳಲ್ಲಿ ಇಟ್ಟರೆ, ಗುಬ್ಬಿಗಳು ಅವುಗಳನ್ನು ತಮ್ಮ ಆವಾಸವಾಗಿ ಪರಿವರ್ಥಿಸಿಕೊಳ್ಳುತ್ತವೆ. ಈ ರೀತಿಯ ಪ್ರಯೋಗ ಸಂಶೋದನೆಗಳಿಂದ ಕೂಡ ದೃಡ ಪಟ್ಟಿದೆ. 
೨. ಬೇಸಗೆಯ ಸಮಯವಾದ್ದರಿಂದ, ಮನೆಯ ಅಂಗಳಗಳಲ್ಲಿ, ಅಂಚುಗಳ ಮೇಲೆ, ಮನೆಯ ತಾರಾಸಿನ ಮೇಲೆ ಬಟ್ಟಲುಗಳಲ್ಲಿ ನೀರು ತುಂಬಿ ಇಡುವುದು. 
೩. ಕಾಳು-ಕಡೆಗಳನ್ನು ಕಸದ ಪುಟ್ಟಿಗೆ ಹಾಕುವ ಬದಲು ಪಕ್ಷಿಗಳು ತಿನ್ನುವಂಥಹ ಜಾಗಳಲ್ಲಿ ಹಾಕಬೇಕು. 
೪. ಚಿಕ್ಕ ಮಕ್ಕಳಲ್ಲಿ ಗುಬ್ಬಿ ಹಾಗು ಇತರ ಪಕ್ಷಿಗಳ ಬಗ್ಗೆ ಜಾಗೃತಿ ಮೂಡಿಸುವುದು, ಕುತೂಹಲ ಬೆಳೆಸುವುದು. 
೫. ಮನೆಯ ಸುತ್ತಲಿನ ಖಾಲಿ ಜಾಗಗಳನ್ನು ಕಾಂಕ್ರೀಟುಕರಣಗೊಳಿಸದೆ , ಗಿಡ-ಬಳ್ಳಿಗಳನ್ನು ನೆಡುವುದು. 

ಹೀಗೆ ಇನ್ನು ಅನೇಕ ರೀತಿಗಳಲ್ಲಿ ನಮ್ಮ ಮನೆಯ ಸುತ್ತ ನಾವು ಗುಬ್ಬಿಗಳಿಗೆ  ಜೀವಿಸಲು ಯೋಗ್ಯವಾದ ವಾತಾವರಣವನ್ನು ನಿರ್ಮಿಸಿದರೆ, ನಾವು ಕೂಡ ಅವುಗಳ ಜೊತೆಗೆ ಜೀವಿಸಬಹುದು. ಇಲ್ಲವಾದರೆ ಅವುಗಳ ಅವಾಸವನ್ನು ಕಸಿದುಕೊಂಡ ಪಾಪಕ್ಕೆ ನಾವು ಗುರಿಯಾಗುವುದಂತೂ ಖಂಡಿತ. ಜೊತೆಗೆ ನಾವು ಮುಂದಿನ ಪೀಳಿಗೆಗೆ ಅಸಮತೋಲನ ಪ್ರಕೃತಿಯನ್ನು ಬಿಟ್ಟು ಹೋಗಬೇಕಾಗುತ್ತದೆ ಕೂಡ.


 
ನಿಮಗಾಗಿ 
ನಿರಂಜನ್ 

ಸೋಮವಾರ, ಮಾರ್ಚ್ 16, 2015

ದಾರಿ ತಪ್ಪಿತೇ ಆಮ್ ಆದ್ಮಿ ಪಕ್ಷ ???

                                                   
ಮ್ ಆದ್ಮಿ ಪಕ್ಷ ತಾನು ಹುಟ್ಟಿದಾಗಿನಿಂದ ತಾನೇನೋ  ಬೇರೆ ಪಕ್ಷಗಳಿಗಿಂತ ಬಹು ಬಿನ್ನ ಹಾಗು ನಾನು ಹುಟ್ಟಿರುವುದೇ ಸ್ವಚ್ಚ ಹಾಗು ಪಾರದರ್ಶಕ ರಾಜಕೀಯ ಮಾಡಲು ಎಂದು ಸಾರಿ ಸಾರಿ ಹೇಳಿಕೊಳ್ಳುತಿತ್ತು. ಅದೇ  ಕಾರಣಕ್ಕಾಗಿ ಅನೇಕ ಚಿಂತಕರು, ದೇಶದ ಯುವಜನತೆ ಹಾಗು ಹೋರಾಟಗಾರರು ನೂರಾರು ಕನುಸುಗಳೊಂದಿಗೆ, ಬಹಳ ಆಶಾವಾದದಿಂದ ಆಮ್ ಆದ್ಮಿ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡಿದ್ದರು.

              ಮಳೆಬಂದಾಗ ಭೂಮಿಯಿಂದ ಮೇಲೇಳುವ  ನಾಯಿ ಕೊಡೆಗಳಂತೆ ಅಥವಾ ಅಣಬೆಗಳಂತೆ, ನಮ್ಮ ದೇಶದಲ್ಲೂ ಪ್ರತಿ ವರ್ಷ ಅನೇಕ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಮೇಲೇಳುತ್ತವೆ ಹಾಗೆಯೇ ಚುನಾವಣೆಯ ನಂತರ ಮರೆಯೂ ಆಗುತ್ತವೆ. ಆಮ್ ಆದ್ಮಿ ಪಕ್ಷ   ಹುಟ್ಟಿದಾಗ ಕೂಡ ಅದೇ ರೀತಿಯಾಗಿ ಮರೆಯಾಗುವ ತಾತ್ಕಾಲಿಕ ಪಕ್ಷಗಳಲ್ಲಿ ಇದೂ ಒಂದು ಎಂದು ಅನೇಕ ಮಂದಿ ವಿಶ್ಲೇಷಿಸಿದರು. ಕಾಂಗ್ರೇಸ್ ಹಾಗು  ಬಿಜೆಪಿ ಪಕ್ಷಗಳು ಕೂಡ ಹಾಗೆಯೇ ಊಹಿಸಿ , ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಿ ಅಣಕವಾಡಿದ್ದರು ಕೂಡ. ಆದರೆ AAP ಆ ರೀತಿಯ ಎಲ್ಲಾ ಊಹೆಗಳನ್ನು ಹುಸಿಮಾಡಿ, ಸ್ಪರ್ದಿಸಿದ ಮೊದಲ ಚುನಾವಣೆಯಲ್ಲೇ ಭರ್ಜರಿ ಗೆಲುವಿನಿಂದ ದೆಹೆಲಿಯಲ್ಲಿ ನೆಲೆಯೂರಿತು. ಆ ಭಾರಿ ಅದು ಚುನಾವಣಾ ಸ್ಪರ್ದಿಸಿದ ರೀತಿ, ಪ್ರಚಾರದಲ್ಲಿ ಬಳಸಿದ ವಿಧಾನಗಳು ಹಾಗು AAP ಸ್ಪರ್ದಿಗಳು ಎದುರಾಳಿಗಳನ್ನು ಹಣಬಲವಿಲ್ಲದಿದ್ದರು ಸೋಲಿಸಿದ ರೀತಿ ನಿಜಕ್ಕೂ ಒಂದು ಬಗೆಯ ಹೊಸ ರಾಜಕೀಯಕ್ಕೆ ನಾಂದಿ ಹಾಡಿತ್ತು. ಆ ಅಭೂತಪೂರ್ವ ಗೆಲುವಿಗೆ ಕಾರಣ ಬರಿ ಆ ಪಕ್ಷದ ಹೋರಾಟದ ತಳಹದಿಯೂ ಅಲ್ಲ, ಹಾಗೆಯೇ ದೈತ್ಯ ನಾಯಕ ಅರವಿಂದ್ ಕೆಜ್ರಿವಾಲ್ ಕೂಡ ಅಲ್ಲ. 


              ನನ್ನ ಪ್ರಕಾರ ಆಪ್ ಗೆಲುವಿಗೆ ಹಾಗು ಅದರ ಜನಪ್ರಿಯತೆಗೆ ಅನೇಕ ಪ್ರಮುಖ ಕಾರಣಗಳಿದ್ದವು, ಅವುಗಳಲ್ಲಿ ಪ್ರಮುಖವಾದವುಗಳೆಂದರೆ , ಆಮ್ ಆದ್ಮಿ ಪಕ್ಷ ಹುಟ್ಟಿದ ತಳಹದಿ, ತತ್ವ- ಸಿದ್ದಾಂತಗಳು , ಪಾರದರ್ಶಕತೆ , ಸಾಮಾನ್ಯನೂ ಕೂಡ ನಾಯಕರ ನೈತಿಕತೆಯನ್ನು  ಪ್ರಶ್ನಿಸಬಹುದಾಗಿದ್ದ ಆಂತರಿಕ ಪ್ರಜಾಪ್ರಭುತ್ವ, ಸ್ವಚ ರಾಜಕೀಯ ಮಾಡುವ ಪಕ್ಷದ ಹಿಂಗಿತ. ಅದೇ ರೀತಿ ಅಂದಿನ ರಾಜಕೀಯ ಪರಿಸ್ಥಿತಿ ಕೂಡ, ಹಾಗೆ ತಾನೇ ಹುಟ್ಟಿದ್ದ ಆಮ್ ಆದ್ಮಿ ಪಕ್ಷಕ್ಕೆ ಬಹಳ ಅನುಕೂಲಕರ ವಾತಾವರಣವನ್ನು ಕಲ್ಪಿಸಿತ್ತು. ಸತತ ೧೫ ವರ್ಷ ಅಧಿಕಾರದಲಿದ್ದ ಶೀಲ ದೀಕ್ಷಿತ್ ಸರ್ಕಾರ ಮಾಡಿದ್ದ ಶೇಷ ಅಬಿವೃದ್ದಿ, ಅನೇಕ ಅಕ್ರಮ ಹಗರಣಗಳು ಹಾಗೆಯೇ ಆ ಹಗರಣಗಳನ್ನು ಸರಿಯಾದ ರೀತಿಯಲ್ಲಿ ವಿರೋದಿಸದ ಮತ್ತು ಸರ್ಕಾರ ವಿರೋದಿ ಅಲೆಯನ್ನು ಸದುಪಯೋಗ ಪಡಿಸಿಕೊಳ್ಳಲೂ ಅಸಮರ್ಥವಾಗಿದ್ದ ದೆಹೆಲಿಯ ಪ್ರಾದೇಶಿಕ ಬಿಜೆಪಿ ಬಳಗ ಕೂಡ ಆಮ್ ಆದ್ಮಿ ಪಕ್ಷದ ಚಿಂತನೆ ಸಮಾಜದಲ್ಲಿ ಬೇರೂರಲು ಸಹಕಾರ ಮಾಡಿದ್ದವು. ಇನ್ನು ಅನೇಕ ವಿಷಯಗಳು ಆಪ್ ಉಗಮಕ್ಕೆ ಹಾಗು ಜನರು ಅದರತ್ತ ನೋಡಲು ಸಹಕಾರಿಯಾದವು ಎಂದು ಹೇಳಿದರೆ ತಪ್ಪಾಗಲಾರದು.  

             ತನ್ನ ಮೊದಲ ಚುನಾವಣೆಯಲ್ಲೇ ನಿರೀಕ್ಷೆಗೂ ಮೀರಿ ಜನಮನ್ನಣೆ ದೊರೆತ ನಂತರ  ಪತ್ರಕರ್ತರು, ಹೋರಾಟಗಾರರು, ರಾಜಕೀಯ ವಿಶ್ಲೇಷಕರು ಆಮ್ ಆದ್ಮಿ ಪಕ್ಷವನ್ನು ಇತರ ಪಕ್ಷಗಳಿಗಿಂತ ವಿಬಿನ್ನವೆಂಬಂತೆ  ಮಾದ್ಯಮದಲ್ಲಿ ಬಿಂಬಿಸಿದರು. ಆಪ್ ಮ್ ಆದ್ಮಿ ಪಕ್ಷ ಕೇವಲ ಒಂದು ಪಕ್ಷವಲ್ಲ ಇದೊಂದು ಹೋರಾಟ, ಜನಸಮಾನ್ಯರ  ಕನಸು, ದೇಶದ ಸಾಂಪ್ರದಾಯಿಕ ರಾಜಕೀಯ ವ್ಯವಸ್ತೆಯನ್ನೇ ಬುಡಮೇಲು ಮಾಡುವ ಪರ್ಯಾಯ ರಂಗವೆಂದೆ ಜನರು ಭಾವಿಸಿದರು.  ಆಮ್ ಆದ್ಮಿ ಪಕ್ಷ ಕೂಡ ಆ ಸಮಯಕ್ಕೆ ಅದೇ ಮೂಲ ಮೌಲ್ಯಗಳನ್ನು ಅಳವಡಿಸಿಕೊಂಡು, ಜನರಿಗೆ ನಿಜವಾಗಿಯೂ ಹತ್ತಿರವಾಗುತ್ತಿತ್ತು. ನಾಯಕರ ಸರಳತೆ, ೪೯ ದಿನ ಅದಿಕಾರದಲ್ಲಿದ್ದಾಗ ಮಾಡಿದ್ದ ಜನಪ್ರಿಯ ಕೆಲಸಗಳು,  ರಾಜನಾಮೆ ನೀಡಿ ಮಾಡಿದ್ದ ತಪ್ಪುಗಳಿಗೆ ಬಹಿರಂಗವಾಗಿ ಕ್ಷಮೆ ಕೇಳಿದ ರೀತಿ ನಿಜವಾಗಿಯೂ ಆಪ್ ಪಕ್ಷಕ್ಕೆ ಮತ್ತೆ ನಡೆದ ವಿಧಾನಸಬೆಯಲ್ಲೂ ಕೂಡ ಅಚ್ಚರಿಯ ಗೆಲುವನ್ನು ತಂದುಕೊಟ್ಟವು.ಆಮ್ ಆದ್ಮಿ ಪಕ್ಷ  ಎರಡನೇ ಬಾರಿಗೆ  ಸಂಪೂರ್ಣ ಬಹುಮತದಿಂದ ಅದಿಕಾರಕ್ಕೆ ಬಂದಿತು. ಈ ಭಾರಿಯೂ ಕೂಡ ಆಮ್ ಆದ್ಮಿ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣ ಕೂಡ  ಕೇವಲ ಒಬ್ಬ ವ್ಯಕ್ತಿಯಲ್ಲ. ಬದಲಾಗಿ ಇಡೀ ಪಕ್ಷ, ಪಕ್ಷದ ಸದ್ಯಸ್ಯರು ಹಾಗು ಅದರ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆಯಲ್ಲಿ ದುಡಿದ ರೀತಿ, ಧನಾತ್ಮಕ ಪ್ರಚಾರ, ನಾಯಕರ ಒಗ್ಗಟ್ಟಿನ ಚುನಾವಣ ತಂತ್ರಗಳು ನಿಜವಾಗಿಯೂ  ಆಮ್ ಆದ್ಮಿ ಪಕ್ಷಕ್ಕೆ ತಾನೇ  ನಂಬಲಾಗದ ರೀತಿಯಲ್ಲಿ ಗೆಲುವು ತಂದು ಕೊಟ್ಟವು. ಇದರ ಫಲವಾಗಿ ಎರಡನೇ ಬಾರಿಗೆ ಅರವಿಂದ್ ಕೆಜ್ರಿವಾಲ್ ಮುಖ್ಯಮಂತ್ರಿಯೂ ಆದರು. ದೆಹಲಿಯ ಜನರು ಸುಭದ್ರ ಸರ್ಕಾರದೊಂದಿಗೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಕೇಜ್ರಿವಾಲ್ ಸರ್ಕಾರದಿಂದ ನಿರೀಕ್ಷಿಸಿತ್ತಿದ್ದರು. ಜನರ ಸಮಸ್ಯಗಳು ಇನ್ನೇನು ಕೆಲವೇ ದಿನಗಳಲ್ಲಿ ದೂರವಾಗುವುವು, ಆಪ್ ಸರ್ಕಾರ ಜನರ ಆಶೋತ್ತರಗಳಿಗೆ ಮಿಡಿಯುವುದರ ಜೊತೆಗೆ ದೆಹೆಲಿಯನ್ನು ಒಂದು ಮಾಧರಿ ನಗರವನ್ನಾಗಿ ನಿರ್ಮಿಸಿ, ಇಡೀ ದೇಶವೇ ದೆಹೆಲಿಯ ಕಡೆಗೆ ನೋಡುವಂತೆ ಮಾಡುತ್ತದೆ ಎಂದು ಬಹಳವಾಗಿ ಭರವಸೆಗಳನ್ನು ಇಟ್ಟುಕೊಂಡಿದ್ದರು. ದೇಶಕ್ಕೆ ದೇಶವೇ ಆಮ್ ಆದ್ಮಿ ಪಕ್ಷವನ್ನು ಹಾಗು ಅದರ ಸರ್ಕಾರವನ್ನು ಸೂಕ್ಷ್ಮವಾಗಿ ಪ್ರತಿದಿನವೂ ಗಮನಿಸತೊಡಗಿದರು. ಆದರೆ ಇತೀಚಿನ ಕೆಲವು ದಿನಗಳಿಂದ ಆಮ್ ಆದ್ಮಿ ಪಕ್ಷದಲ್ಲಿ ನಡೆಯುತ್ತಿರುವ ಘಟನಾವಳಿಗಳು ಜನರಲ್ಲಿ ತೀರ ನಿರಾಸೆ ಮೂಡಿಸಿವೆ. ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಬಿನ್ನಬಿಪ್ರಾಯದ ಬೆಂಕಿ ಕಾಣಿಸಿದೆ. ಪಕ್ಷದಲ್ಲಿನ ಈ ಬಿನ್ನಬಿಪ್ರಾಯದ ಜ್ವಾಲೆ ಸರ್ಕಾರದ ಮೇಲೆ ಯಾವ ಪರಿಣಾಮ ಬೀರಬಹುದೆಂದು ಕಾಲವೇ ಹೇಳಬೇಕಿದೆ.

                 ಆಮ್ ಆದ್ಮಿ ಪಕ್ಷದ ಈ ಒಳಜಗಳಕ್ಕೆ ಅನೇಕ ಕಾರಣಗಳಿರಬಹುದು, ಇದೊಂದು ಬೇರೆ ರೀತಿಯ ಪಕ್ಷವೆಂದೇ ಭಾವಿಸಿದ್ದ ಜನರಿಗೆ ನಿರಾಸೆ ಹಾಗು ದುಃಖ ಉಮ್ಮಳಿಸಿ ಬರತೊಡಗಿದೆ. ಚುನಾವಣೆಗು ಮೊದಲು ಕಾಣಿಸಿದ್ದ ಆ ನಾಯಕರ ಒಗ್ಗಟ್ಟು ಅದಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುರಿದುಬಿದ್ದಿದೆ. ಕೆಲವು ನಾಯಕರುಗಳಲ್ಲಿ ಪರಸ್ಪರ ನಂಬಿಕೆಯ ಕೊರತೆ ಎದ್ದು ಕಾಣುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಜನರಿಗೆ, ಪಕ್ಷ ಪ್ರೇಮಿಗಳಿಗೆ ತಮ್ಮ ಪಕ್ಷ ಮೂಲ ಸಿದ್ದಾಂತಗಳನ್ನೇ ಗಾಳಿಗೆತೂರಿದೆ ಎನ್ನುವ ಭಾವ ಕಾಡತೊಡಗಿದೆ. ಪ್ರತಿದಿನವೂ ಆರೋಪ, ಪ್ರತ್ಯಾರೋಪಗಳ ಮಳೆಯೇ ಸುರಿಯುತ್ತಿದೆ ಎಲ್ಲೆಂದರಲ್ಲಿ. ಟ್ವಿಟ್ಟರ್, ಫೇಸ್ಬುಕ್ , ಟೀವಿ ಹಾಗು ದಿನಪತ್ರಿಕೆಗಳಲ್ಲಿ ನಾಯಕರ ಕೆಸರೆರಚಾಟ , ಆಶಾಭರಿತನಾಗಿದ್ದ ಜನಸಾಮಾನ್ಯನಿಗೆ ಹೇಸಿಗೆ ಬರಿಸಿದೆ. ನಾಯಕರ ಈ ಕಿತ್ತಾಟ ಆಮ್ ಆದ್ಮಿ ಪಕ್ಷದ ಬುಡವನ್ನೇ ಇಬ್ಬಾಗವಾಗಿ ಸೀಳುವುದರ ಜೊತೆಗೆ ಕಾರ್ಯಕರ್ತರ ಆತ್ಮ ವಿಶ್ವಾಸವನ್ನೇ ಕುಂದಿಸಿದೆ. ಈ ಎಲ್ಲಾ ಬೆಳವಣಿಗೆಗಳು ಸದಸ್ಯರನ್ನು , ಕಾರ್ಯಕರ್ತರನ್ನು ತೀರ ಮುಜುಗರಕ್ಕೀಡು ಮಾಡಿವೆ ಕೂಡ. ತಿಂಗಳ ಹಿಂದೆಯಷ್ಟೇ ಹಾಡಿ ಹೋಗಳಿದ್ದ ಸುದ್ದಿವಾಹಿನಿಗಳು, ಪತ್ರಕರ್ತಕರು ಈಗ ಮನಸೋ ಇಚ್ಚೆ ಉಗಿಯುವೊಷ್ಟು ಕೀಳುಮಟ್ಟದ ರಾಜಕೀಯ ಮಾಡುತಿದೆ  ಆಮ್ ಆದ್ಮಿ ಪಕ್ಷ. ಇದೊಂದು ತುಂಬಾ ವಿಷಾದದ ಸಂಗತಿ. ನಿಜವಾಗಿಯೂ ಇದೊಂದು ದುರಾದೃಷ್ಟಕರ ಬೆಳವಣಿಗೆಯೂ ಕೂಡ. ಜನರು,ಮತದಾರರು ಕಟ್ಟಿದ ಕನಸುಗಳು ನುಚ್ಚು ನೂರಾಗಿವೆ. ಪಕ್ಷದ ಅದಿನಾಯಕರು ತಮ್ಮ ಅಹಮ್ಮುಗಳನ್ನು ಬಿಟ್ಟು, ತಮ್ಮ ತಮ್ಮ ಜವಾಬ್ದಾರಿಯನ್ನು ತಾವು ಅರಿತುಕೊಂಡರೆ ಮಾತ್ರ ಪಕ್ಷ ಉಳಿಯಬಹುದೇ ಹೊರತು ಈ ರೀತಿಯ ಕೀಳು ಮಟ್ಟದ, ಸಂಕುಚಿತ ರಾಜಕೀಯ ಮಾಡಿದರೆ, ಮುಂದೊಂದು ದಿನ ಜನಸಾಮಾನ್ಯರು ಪಕ್ಷದಿಂದ ದೂರ ಸರಿಯುವುದಂತು ನಿಜ. ತತ್ವ ಸಿದ್ದಾಂತಗಳನ್ನು ಬಿಟ್ಟಮೇಲೆ ಒಬ್ಬ ಕಾರ್ಯಕರ್ತ ಯಾವ ಕಾರಣಗಳಿಗೆ ಆಮ್ ಆದ್ಮಿ ಪಕ್ಷಕ್ಕೆ ದುಡಿಯಬೇಕು ?? ಬೇರೆ ಪಕ್ಷಗಳಿಗಿಂತ ನಾವು ವಿಬಿನ್ನ ಎನ್ನುತ್ತಿದ್ದ ನಾಯಕರು ಈಗ ಆಗುತ್ತಿರುವ ಬೆಳವಣಿಗೆಗಳಿಗೆ ಏನೆಂದು ಉತ್ತರ ಕೊಡುತ್ತಾರೆ ?? ಈ ಜಗಳದಿಂದ ನಿಜವಾಗಿಯೂ ಪಕ್ಷಕ್ಕೆ ಒಳ್ಳೆಯದಾಗುವುದೇ ?? ಎಂದು ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪಕ್ಷವು ತಾನು ತುಳಿಯುತ್ತಿರುವ ಹಾದಿಯ ಬಗ್ಗೆ ಸ್ವಲ್ಪ ಯೋಚಿಸಿ, ಚಿಂತನೆ ಮಾಡಿಕೊಳ್ಳಬೇಕಿದೆ. ನಾಯಕರು ಈ ತಕ್ಷಣಕ್ಕೆ ತಮ್ಮ ವರ್ತನೆಗಳನ್ನು ಬದಾಲಾಯಿಸಿಕೊಳ್ಳದಿದ್ದರೆ, ತಮ್ಮ ಮೂಲ ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ನೀಡದೆ, ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಕೊಟ್ಟರೆ ಮಾತ್ರ ಆಮ್ ಆದ್ಮಿ ಪಕ್ಷ ಒಂದು ವಿಬಿನ್ನ ಪಕ್ಷವಾಗಿ ಉಳಿಯುತ್ತದೆ. ಆಮ್ ಆದ್ಮಿ ಪಕ್ಷ ಕೂಡ ಬೇರೆ ಪಕ್ಷಗಳಂತೆ ಕೇವಲ ಒಂದು ಸಮಾನ್ಯ ಪಕ್ಷವಾದರೆ ಜನರು ಆಮ್ ಆದಿ ಪಕ್ಷವನ್ನು ಮತ್ತೆಂದು ಬೆಂಬಲಿಸುವುದಿಲ್ಲ. ಮಾಡಿದ ತಪ್ಪುಗಳಿಗೆ ಕ್ಷಮೆಕೇಳಿ, ಮತ್ತೆಂದೂ  ಈ ರೀತಿಯ ತಪ್ಪುಗಳು ಉದ್ಭವಿಸದಂತೆ, ಎಲ್ಲಾ ನಾಯಕರು ಒಟ್ಟಾಗಿ ಮುನ್ನೆಡೆಯ ಬೇಕಿದೆ. ಎಲ್ಲರನ್ನು ತಮ್ಮೊಂದಿಗೆ  ತೆಗೆದುಕೊಂಡು, ದಕ್ಷವಾಗಿ ಮುನ್ನೆಡೆಯುವ ಮನಸ್ಥಿಯನ್ನು ಪಕ್ಷದ ಅದಿನಾಯಕರು ತುರ್ತಾಗಿ ಬೆಳೆಸಿಕೊಳ್ಳದಿದ್ದರೆ ನಿಜವಾಗಿಯೂ ಈ ಪಕ್ಷಕ್ಕೆ ಕೆಟ್ಟ ಹೆಸರು ಬರುವುದು ನಿಶ್ಚಿತ. ಪಕ್ಷ ಕೆಟ್ಟು ಹೋಗಿ, ಎಷ್ಟೇ ವರ್ಷ ಆದಿಕಾರದಲಿದ್ದು ಎಂಥಹ ಘನಕಾರ್ಯಗಳನ್ನು ಮಾಡಿದರು ಜನರು  ಆಮ್ ಆದ್ಮಿ ಪಕ್ಷವನ್ನು  ಮತ್ತೆಂದೂ  ಒಪ್ಪುವುದಿಲ್ಲ, ಸ್ವೀಕರಿಸುವುದೂ ಇಲ್ಲ.  

              ಚುನಾವಣೆಯಲ್ಲಿ ಬರಿ ಗೆಲ್ಲುವುದೇ ಒಂದು ಪಕ್ಷದ ಮಾನದಂಡವಾಗುವುದಿಲ್ಲ. ಮೂಲ ಸಿದ್ದಾಂತಗಳು, ನಾಯಕರ ನೈತಿಕತೆ,  ಪಾರದರ್ಶಕ ರಾಜಕೀಯ, ಆಂತರಿಕ ಪ್ರಜಾಪ್ರಭುತ್ವ  ಯಾವುದೇ ಪಕ್ಷದ ಬೆನ್ನೆಲುಬು. ಅದೇ ರೀತಿ ಆಮ್ ಆದ್ಮಿ ಪಕ್ಷವು ಕೂಡ ವಿಬಿನ್ನ ಪಕ್ಷವಾಗುವುದಕ್ಕೆ ಮೂಲ ಕಾರಣ ಅದರ  ನೀತಿ ಸಿದ್ದಾಂತಗಳು ಮಾತ್ರ. ಇದನ್ನು ಮರೆತರೆ ಆಮ್ ಆದ್ಮಿ ಪಕ್ಷವೂ ಕೂಡ ಭಾರತದ ಮತ್ತೊಂದು ಸಮಾನ್ಯ ಪಕ್ಷದ ಸಾಲಿಗೆ ಸೇರುತ್ತದೆ. ಚುನಾವಣೆಯಲ್ಲಿ ಗೆಲ್ಲುವುದೊಂದೇ ಗುರಿಯನ್ನಾಗಿಸಿಕೊಳ್ಳದೆ, ಒಳ್ಳೆಯ ನೀತಿ-ಸಿದ್ದಾಂತಗಳೊಂದಿಗೆ, ಎಲ್ಲ ನಾಯಕರು  ಒಗ್ಗಟ್ಟಾಗಿ ಮುನ್ನೆಡೆದು, ಸಾಮನ್ಯ  ಜನರ ದ್ವನಿಯಾದರೆ ಮಾತ್ರ ಆಮ್ ಆದ್ಮಿ ಪಕ್ಷದ ಹುಟ್ಟಿಗೆ ಸಾರ್ತಕತೆ ಸಿಗುತ್ತೆದೆ ಹಾಗು ಲಕ್ಷಾಂತರ ನಿಸ್ವಾರ್ಥ ಕಾರ್ಯಕರ್ತರ ಕನಸು ನನಸಾಗುತ್ತದೆ.

ನಿಮಗಾಗಿ 
ನಿರಂಜನ್